---Advertisement---

45 ಸಿನಿಮಾಗಾಗಿ ಚಿತ್ರತಂಡದಿಂದ ಹೊಸ ಸಾಹಸ

By Chandan Naik

December 5, 2025 10:08 PM

---Advertisement---

ನಟ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಮಲ್ಟಿಸ್ಟಾರರ್ ಸಿನಿಮಾ ʻ45ʼ ಚಿತ್ರ ಡಿಸೆಂಬರ್ 25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಿಸೆಂಬರ್ 15 ರಂದು ಈ ಸಿನಿಮಾದ ಟ್ರೇಲರ್ ಅನಾವರಣವಾಗಲಿದೆ. ಟ್ರೇಲರ್ ಬಿಡುಗಡೆ ಸಮಾರಂಭವನ್ನು ವಿಭಿನ್ನವಾಗಿ ಅಯೋಜಿಸಲು ಚಿತ್ರತಂಡ ನಿರ್ಧರಿಸಿದೆ. ಈ ಕುರಿತು ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸಿನಿಮಾದ ನಿರ್ದೇಶಕ ಅರ್ಜುನ್ ಜನ್ಯ ಮಾಹಿತಿ ನೀಡಿದ್ದಾರೆ.

ಅರ್ಜುನ್‌ ಜನ್ಯ ಹೇಳಿದ್ದೇನು?
“ನಮ್ಮ 45 ಸಿನಿಮಾದ ಟ್ರೇಲರ್ ರಿಲೀಸ್ ಇವೆಂಟ್ ಡಿಸೆಂಬರ್ 15ರಂದು ಬೆಂಗಳೂರಿನ ವಿದ್ಯಾಪೀಠದ ಬಳಿಯಿರುವ ಶಂಕರ್ ನಾಗ್ ಸರ್ಕಲ್ ಹತ್ತಿರದ ಕೆಂಪೇಗೌಡ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಈವರೆಗೂ ಯಾರು ಮಾಡಿರದ ವಿಭಿನ್ನ ಪ್ರಯತ್ನವನ್ನು ಮಾಡುತ್ತಿದ್ದೇವೆ‌. ಬೆಂಗಳೂರಿನಲ್ಲಿ ನಡೆಯುವ ಇವೆಂಟ್ ಅನ್ನು ಕರ್ನಾಟಕದ ಏಳು ಪ್ರಮುಖ ಜಿಲ್ಲೆಗಳ ಚಿತ್ರಮಂದಿರದಲ್ಲಿ ಕ್ಯೂಬ್ ಮೂಲಕ ನೇರ ಪ್ರಸಾರ ಮಾಡಲಾಗುವುದು. ಮೈಸೂರು, ಮಂಗಳೂರು, ತುಮಕೂರು, ದಾವಣಗೆರೆ, ಶಿವಮೊಗ್ಗ, ಹೊಸಪೇಟೆ, ಹುಬ್ಬಳ್ಳಿಯಲ್ಲಿ ಚಿತ್ರಮಂದಿರಗಳಲ್ಲಿ ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ” ಎಂದು ಅರ್ಜುನ್‌ ಜನ್ಯ ಹೇಳಿದ್ದಾರೆ.

ಡಿಸೆಂಬರ್‌ 15ರಂದು ಮತ್ತೊಂದು ಸರ್ಪ್ರೈಸ್‌
“ಅಭಿಮಾನಿಗಳಿಗೆ ಆಯಾ ಜಿಲ್ಲೆಗಳಲ್ಲಿ ಪಾಸ್ ವ್ಯವಸ್ಥೆ ಮಾಡಲಾಗಿದ್ದು, ಉಚಿತ ಪ್ರವೇಶವಿರುತ್ತದೆ. ಏಕಕಾಲಕ್ಕೆ ಏಳು ಜಿಲ್ಲೆಯ ಊರುಗಳಲ್ಲೂ ಟ್ರೇಲರ್ ಅನಾವರಣವಾಗಲಿದೆ. ಟ್ರೇಲರ್ ವೀಕ್ಷಣೆಯ ನಂತರ ಅಭಿಮಾನಿಗಳನ್ನುದ್ದೇಶಿಸಿ ಚಿತ್ರದ ಮೂವರು ನಾಯಕರು ಮಾತನಾಡಲಿದ್ದಾರೆ. ಇಲ್ಲಿಯವರೆಗೂ ಯಾರೂ ಈ ಥರದ ಪ್ರಯತ್ನ ಮಾಡಿಲ್ಲ. ಇಷ್ಟೇ ಅಲ್ಲದೆ ಟ್ರೇಲರ್ ಬಿಡುಗಡೆ ದಿನ ಮತ್ತೊಂದು ವಿಶೇಷ ಕೂಡ ಇರಲಿದೆ. ಅದು ಏನೆಂದು ಎಲ್ಲರಿಗೂ ಆ ದಿನವೇ ತಿಳಿಯುತ್ತದೆ. ಡಿಸೆಂಬರ್ 15ರ ನಂತರ ಚಿತ್ರತಂಡ ಪ್ರಚಾರದ ನಿಮಿತ್ತವಾಗಿ ಬೇರೆ ರಾಜ್ಯಗಳಿಗೆ ಭೇಟಿ ನೀಡಲಿದೆ” ಎಂದು ನಿರ್ದೇಶಕ ಅರ್ಜುನ್ ಜನ್ಯ ತಿಳಿಸಿದರು.

“ಭಾರತದ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಈ ಚಿತ್ರವನ್ನು ನಿರ್ಮಿಸಿರುವ ಹೆಮ್ಮೆ ಇದೆ. ಅದನ್ನು ಜನರು ಮೆಚ್ಚಿಕೊಳ್ಳುತ್ತಾರೆ ಎಂಬ ಭರವಸೆಯೂ ಇದೆ. ಡಿಸೆಂಬರ್ 15 ರ ಟ್ರೇಲರ್ ಬಿಡುಗಡೆ ಸಮಾರಂಭ ವಿಭಿನ್ನವಾಗಿ ನಡೆಯಲಿದೆ” ಎನ್ನುತ್ತಾರೆ ನಿರ್ಮಾಪಕ ರಮೇಶ್ ರೆಡ್ಡಿ. ‌ ಕರ್ನಾಟಕದ ಪ್ರಮುಖ ಏಳು ಊರುಗಳ ಚಿತ್ರಮಂದಿರದಲ್ಲಿ ಕ್ಯೂಬ್ ಬಳಸಿ ಪ್ರದರ್ಶಿಸಲು ಆ ಸಂಸ್ಥೆಯನ್ನು ಸಂಪರ್ಕಿಸಲಾಗಿದೆಯಂತೆ.

Chandan Naik

ನನ್ನ ಹೆಸರು ಚಂದನ ನಾಯ್ಕ. ನಾನು ಕನ್ನಡ ಡಿಜಿಟಲ್ ಮೀಡಿಯಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಬರಹಗಾರ. ಸಿನಿಮಾ ಸುದ್ದಿ, ಮನರಂಜನೆ, ಆಟೋಮೊಬೈಲ್, ತಂತ್ರಜ್ಞಾನ, ಸರ್ಕಾರಿ ಯೋಜನೆಗಳ ಸುದ್ದಿಯನ್ನು ಸರಳ, ಸ್ಪಷ್ಟ ಹಾಗೂ ನಿಖರವಾಗಿ ಓದುಗರಿಗೆ ತಲುಪಿಸುವುದು ನನ್ನ ಪ್ರಮುಖ ಗುರಿ. ನಾನು ಕನ್ನಡ ಭಾಷೆಯಲ್ಲೇ ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.

Comments

Leave a Comment